ರೈತರ ಪರವಾಗಿ ಹೋರಾಟ ಮುಂದುವರೆಯಲಿದೆ: ಕೆ ಆರ ಎಸ್ ಮಂಡ್ಯ - ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

1 min read · Updated 16 views
WhatsApp
ರೈತರ ಪರವಾಗಿ ಹೋರಾಟ ಮುಂದುವರೆಯಲಿದೆ: ಕೆ ಆರ ಎಸ್ ಮಂಡ್ಯ - ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ  ಬಿ.ಜೆ.ಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ಬಳಿಕ ರೈತರ ಸಂಕಷ್ಟವನ್ನು ಸಂಪೂರ್ಣವಾಗಿ ಮರೆತಿದ್ದಾರೆ ಎಂದು ಆರೋಪಿಸಿದರು.

ಕೆಆರ್‌ಎಸ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ಸರ್ಕಾರ ರಾಜಕೀಯ ಲೆಕ್ಕಾಚಾರ ನಡೆಸುತ್ತಿದೆ ಎಂದು ಟೀಕಿಸಿದರು.

ಬರದ ಮುನ್ಸೂಚನೆ ಇದ್ದರೂ ಸರ್ಕಾರ ನಿರ್ಲಕ್ಷ್ಯ ವಹಿಸಿದೆ

ಕೇಂದ್ರ ಸರ್ಕಾರ ಬರದ ಮುನ್ಸೂಚನೆ ನೀಡಿದ್ದರೂ ರಾಜ್ಯ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿಲ್ಲ. ಬದಲಾಗಿ ಆಡಳಿತದ ಗಮನ ಅಧಿಕಾರದ ಒಳಜಗಳ ಮತ್ತು ಕುರ್ಚಿ ರಾಜಕಾರಣದತ್ತವೇ ಇತ್ತು. ಇದರ ಪರಿಣಾಮವಾಗಿ ರೈತರ ಬದುಕಿನೊಂದಿಗೆ ಚೆಲ್ಲಾಟ ನಡೆಸಲಾಗಿದೆ ಎಂದು ವಿಜಯೇಂದ್ರ ಆರೋಪಿಸಿದರು.

ನೀರಾವರಿ ಸಚಿವರಾಗಿದ್ದಾಗ ರೈತರ ಪರ ನಿಲ್ಲಲಿಲ್ಲ

ಡಿ.ಕೆ. ಶಿವಕುಮಾರ್ ಅವರು ಈ ಹಿಂದೆ ನೀರಾವರಿ ಸಚಿವರಾಗಿಯೂ, ಉಪಮುಖ್ಯಮಂತ್ರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಾವೇರಿ ವಿಚಾರದ ಸಂಪೂರ್ಣ ಅರಿವು ಇದ್ದರೂ ತಮಿಳುನಾಡಿಗೆ ನೀರು ಬಿಡುಗಡೆಗೆ ಒಪ್ಪಿಗೆ ನೀಡಿರುವುದು ರೈತರಿಗೆ ಅನ್ಯಾಯವಾಗಿದೆ. ದೆಹಲಿಗೆ ಹಲವು ಬಾರಿ ತೆರ

ಸರ್ವಪಕ್ಷ ಸಭೆ ತಡವಾಗಿ ಕರೆಯಲಾಗಿದೆ

ತಮಿಳುನಾಡು ನೀರು ಕೇಳುವ ಮೊದಲುವೇ ಸುಮಾರು 3.5 ಳಿ ಪಕ್ಷದ ನಾಯಕತ್ವದೊಂದಿಗೆ ಸಭೆ ನಡೆಸಿದರೂ, ಕಾವೇರಿ ಕೊಳ್ಳದ ರೈತರ ಹಿತಾಸಕ್ತಿಗಾಗಿ ಒಮ್ಮೆಯಾದರೂ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಿಲ್ಲ ಎಂದು ಅವರು ಟೀಕಿಸಿದರು.

ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗಿದೆ. ಆ ಸಂದರ್ಭದಲ್ಲಿ ಸರ್ವಪಕ್ಷ ಸಭೆ ಕರೆಯುವ ಅಗತ್ಯ ಸರ್ಕಾರಕ್ಕೆ ಕಾಣಿಸಲಿಲ್ಲ. ಈಗ ಸರ್ವಪಕ್ಷ ಸಭೆ ಕರೆಯುತ್ತಿರುವುದು "ಊರು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತೆ" ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಕುರ್ಚಿ ಉಳಿಸಿಕೊಳ್ಳುವುದಕ್ಕೋ ಅಥವಾ ರೈತರ ರಕ್ಷಣೆಗೆ?

ಈಗಿನ ಸರ್ವಪಕ್ಷ ಸಭೆ ರೈತರ ಹಿತಕ್ಕಾಗಿ ಅಲ್ಲ, ಮುಖ್ಯಮಂತ್ರಿಯವರ ರಾಜಕೀಯ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, "ಕುರ್ಚಿ ಹೋದರೂ ಪರವಾಗಿಲ್ಲ, ರೈತರ ಪರ ನಿಲ್ಲುತ್ತೇನೆ, ನೀರು ಬಿಡುವುದಿಲ್ಲ" ಎಂಬ ಸ್ಪಷ್ಟ ಘೋಷಣೆಯನ್ನು ಮುಖ್ಯಮಂತ್ರಿ ಮಾಡಬೇಕು. ಅಂತಹ ನಿಲುವು ಪ್ರಕಟಿಸಿದರೆ ಬಿಜೆಪಿ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಲು ಸಿದ್ಧವಿದೆ ಎಂದು ಹೇಳಿದರು.

ರೈತರ ಪರವಾಗಿ ಬಿಜೆಪಿ ಹೋರಾಟ ಮುಂದುವರೆಯಲಿದೆ

ಬಿಜೆಪಿ ಜವಾಬ್ದಾರಿಯುತ ವಿರೋಧ ಪಕ್ಷವಾಗಿ ರೈತರ ಹಕ್ಕುಗಳ ರಕ್ಷಣೆಗೆ ಬದ್ಧವಾಗಿದೆ. ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿರುವ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದಲೇ ಈ ಪ್ರತಿಭಟನೆ ನಡೆಸಲಾಗಿದೆ. ಮುಂದೆಯೂ ರೈತರ ಹಿತಾಸಕ್ತಿಗಾಗಿ ಬಿಜೆಪಿ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಲಿದೆ ಎಂದು ವಿಜಯೇಂದ್ರ ತಿಳಿಸಿದರು.

ಕನ್ನಂಬಾಡಿ ಕಟ್ಟೆಯ ಇತಿಹಾಸವನ್ನು ನೆನಪಿಸಿದ ವಿಜಯೇಂದ್ರ

ಮೈಸೂರು ಒಡೆಯರು ತಮ್ಮ ಸ್ವಂತ ಆಭರಣಗಳನ್ನು ಮಾರಾಟ ಮಾಡಿ ಕನ್ನಂಬಾಡಿ ಕಟ್ಟೆಯನ್ನು ನಿರ್ಮಿಸಿದ್ದರು. ಆ ಕಟ್ಟೆಯ ಉದ್ದೇಶವೇ ರಾಜ್ಯದ ರೈತರ ಹಿತಾಸಕ್ತಿಯನ್ನು ಕಾಪಾಡುವುದು. ಅಂತಹ ಐತಿಹಾಸಿಕ ಪರಂಪರೆಯನ್ನು ಗೌರವಿಸುವ ಬದಲು ಸರ್ಕಾರ ರೈತರ ಹಿತವನ್ನು ಕಡೆಗಣಿಸುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದರು.

Advertisement
AdSense · in-feed

Related